ಸಂಸದ ಅನಂತ್ ಕುಮಾರ್ ಹಗಡೆ ಹೇಳಿಕೆಗೆ-ತೀವ್ರ ಆಕ್ರೋಶ ಹೊರಹಾಕಿದ ಕಾಂಗ್ರೆಸ್.
ದೊಡ್ಡಬಳ್ಳಾಪುರ : ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಅನಂತ್ ಕುಮಾರ್ ಹೆಗಡೆ ಹೇಳಿಕೆ ಸಂವಿಧಾನಕ್ಕೆ ಮಾಡಿದ ಅಪಮಾನ ಹಾಗೂ ಅಕ್ಷಮ್ಯ ಅಪರಾಧವಾಗಿದ್ದು, ಕಾಂಗ್ರೆಸ್ ಪಕ್ಷವು ಇಂತಹ ಕ್ಷುಲ್ಲಕ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತದೆ, ಇದರ ವಿರುದ್ಧ ಕಾಂಗ್ರೆಸ್ ವತಿಯಿಂದ ತೀವ್ರರವಾದ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯ ಲೋಕಸಭಾ ಸದಸ್ಯ ಅನಂತ ಕುಮಾರ್ ಹೆಗಡೆ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.
ಪದೇ ಪದೇ ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಹಾಗೂ ದ್ವೇಷಮಯ ವಾತವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿರುವ ಹೆಗಡೆ ಅವರನ್ನು ಬಿಜೆಪಿ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಇದುವರೆಗೂ ವಿರೋಧಿಸಿಲ್ಲ. 8 ದಿನಗಳೊಳಗಾಗಿ ಅನಂತ ಕುಮಾರ್ ಹೆಗಡೆ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅವನೊಬ್ಬ ಅಯೋಗ್ಯ ಅವನಿಗೆ ನಾನು ಗೌರವ ಕೊಡುವುದಿಲ್ಲ, ಗೌರವ ಕೊಡುವಂತಹದನ್ನು ಅವನು ಉಳಿಸಿಕೊಂಡಿಲ್ಲ. ಅವನು ಸಂಸದಾರಾಗಿ ಪ್ರಮಾಣವಚನ ಸ್ಪೀಕಾರ ಮಾಡಿದ್ದು ಇದೇ ಸಂವಿದಾನದ ಅಡಿಯಲ್ಲಿ ಎಂಬುದನ್ನು ಮರೆತು ಇಂದು ಸಂವಿದಾನದ ವಿರೋದವಾಗಿ ಮಾತನಾಡುತ್ತಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.
ಚುನಾವಣೆ ಬಾಂಡ್ ಬಹಿರಂಗ ಮಾಡಿದರೆ ಬಿಜೆಪಿಗೆ ಭಾರೀ ಮುಖಭಂಗವಾಗುತ್ತದೆ. ಹೀಗಾಗಿ ಬಿಜೆಪಿಯು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಿಎಎ ಜಾರಿ ಮಾಡಿದೆ ಎಂದು ಆರೋಪಿಸಿದರು.
ಈ ವೇಳೆ ಕೆಪಿಸಿಸಿ ಸದಸ್ಯ ಬಿ.ಜಿ.ಹೇಮಂತರಾಜು, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೈರೆಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್ ಉಪಸ್ಥಿತರಿದ್ದರು.