ರೈಲ್ವೆ ಸ್ಟೇಷನ್ ಬಸ್ ನಿಲ್ದಾಣದಲ್ಲಿ ಮತದಾನ ಜಾಗೃತಿ ಜಾಥಾ

ದೊಡ್ಡಬಳ್ಳಾಪುರ: ಲೋಕಸಭೆ ಚುನಾವಣೆ..2024ರ ಹಿನ್ನೆಲೆಯಲ್ಲಿ ನಗರಸಭಾ ಸ್ವೀಪ್ ಸಮಿತಿ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸ್ವೀಪ್ ಸಮಿತಿಯ ನಿರ್ದೇಶನದಂತೆ ನಗರಸಭಾ ವ್ಯಾಪ್ತಿಯ ರೈಲ್ವೆ ಸ್ಟೇಷನ್ ಬಸ್ ನಿಲ್ದಾಣ ದಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕ ರಿಗೆ ಮತದಾನದ ಪ್ರತಿಘ್ನ ವಿಧಿ ಬೋಧಿಸಲಾಯ್ತು. ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರಸಭೆ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.