*ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳಿಗೆ ಜ್ಞಾನಾಂಕುರ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ*
ಕೃಷ್ಣರಾಜಪೇಟೆ: ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಅಭಿಮಾನದಿಂದ ಮಾಡುತ್ತಿವೆ ಹರಿಚರಣ್ ತಿಲಕ್ ಅಭಿಮತ
ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಉತ್ತಮವಾದ ಸಂಸ್ಕಾರ ನೀಡಿ ಭವಿಷ್ಯದ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಬಿ.ಎಲ್.ದೇವರಾಜ್ ಹೇಳಿದರು.
ಅವರು ಕೃಷ್ಣರಾಜಪೇಟೆ ತಾಲೂಕಿನ ಪಟ್ಟಣದ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳು ಹಾಗೂ ಮಕ್ಕಳ ಪೋಷಕರಿಗೆ ಜ್ಞಾನಂಕುರ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ ಅಕ್ಷರಾಭ್ಯಾಸ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಶೃಂಗೇರಿಯ ಶಾರದಾ ಪೀಠದಲ್ಲಿ ಕೇವಲ ಶ್ರೀಮಂತರ ಮಕ್ಕಳಿಗೆ ಮಾತ್ರ ಸೀಮಿತವಾಗಿದ್ದ ಅಕ್ಷರಾಭ್ಯಾಸವನ್ನು ಆದಿಚುಂಚನಗಿರಿಯ ಪೀಠಾಧಿಪತಿ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿಗಳ ಆಶಯದಂತೆ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣಗೌಡ ಅವರು ಗ್ರಾಮೀಣ ಪ್ರದೇಶದ ರೈತಾಪಿ ವರ್ಗಕ್ಕೆ ಸೇರಿದ ಮಕ್ಕಳಿಗೂ ಜ್ಞಾನಂಕುರ ಕಾರ್ಯಕ್ರಮದ ಮೂಲಕ ಅಕ್ಷರಾಭ್ಯಾಸ ಮಾಡಿಸಿ ತಾಯಿ – ಶಾರದೆಯ ಕೃಪೆಯು ದೊರೆಯುವಂತೆ ಮಾಡಿದ್ದಾರೆ ಎಂದು ಅಭಿಮಾನದಿಂದ ಹೇಳಿದ ಪ್ರಕಾಶ್ ವಿದ್ಯಾರ್ಥಿಗಳಿಗೆ ಅಂಕ ಗಳಿಕೆಯೊಂದೇ ಮಾನದಂಡವಲ್ಲ ಆದ್ದರಿಂದ ಮಕ್ಕಳಿಗೆ ಶಿಕ್ಷಣದ ಜ್ಞಾನದ ಬೆಳಕಿನ ಸಂಸ್ಕಾರದ ಜೊತೆಗೆ ಉತ್ತಮವಾದ ಸಂಸ್ಕಾರ ನೀಡಿ ಉತ್ತಮವಾದ ನಾಗರಿಕರನ್ನಾಗಿ ಸಜ್ಜುಗೊಳಿಸಬೇಕು. ಗಿಡ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಡಬೇಕು ಎಂದು ಮನವಿ ಮಾಡಿದರು.
ಆದಿಚುಂಚನಗಿರಿ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿಗಳಾದ ಡಾ.ಜೆ. ಎನ್.ರಾಮಕೃಷ್ಣಗೌಡ ಮಾತನಾಡಿ ಗುರುಕುಲ ಮಾದರಿಯ ಗುಣಮಟ್ಟದ ಶಿಕ್ಷಣಕ್ಕೆ ತಾಲ್ಲೂಕಿನಲ್ಲಿಯೇ ಹೆಸರುವಾಸಿಯಾಗಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ ಆಯೋಜಿಸಿ ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಗುರುಹಿರಿಯರು ಹಾಗೂ ತಂದೆ ತಾಯಿಗಳನ್ನು ಗೌರವಿಸುವ ಉತ್ತಮವಾದ ಸಂಸ್ಕಾರ ನೀಡಿ ನಮ್ಮ ಮಕ್ಕಳಲ್ಲಿ ಸದ್ಗುಣಗಳನ್ನು ತುಂಬಿ ಸಮಾಜಮುಖಿಯಾಗಿ ಮುನ್ನಡೆಸುವ ಕೆಲಸವನ್ನು ನಮ್ಮ ಶಾಲೆಯ ಶಿಕ್ಷಕ ವೃಂದವು ಅಭಿಮಾನದಿಂದ ಮಾಡುತ್ತಾ ಮಕ್ಕಳ ಯಶಸ್ಸನ್ನು ಕಣ್ಣಾರೆ ಕಂಡು ಸಂಭ್ರಮಿಸುತ್ತಿದ್ದಾರೆ ಎಂದು ರಾಮಕೃಷ್ಣಗೌಡ ಹೇಳಿದರು.
ಈ ಸಂದರ್ಭದಲ್ಲಿ ಕೆ.ಹರಿಚರಣ್ ತಿಲಕ್, ಬಿ ಎಲ್ ದೇವರಾಜ್. ಶೀಳನೇರೆ ಅಂಬರೀಷ್. ನ್ಯಾಯಾಧೀಶರಾದ ಗೋವಿಂದರಾಜ್. . ವಕೀಲರ ಸಂಘದ ತಾ. ಅಧ್ಯಕ್ಷರಾದ ನಾಗೇಗೌಡ. ವಕೀಲರಾದ ವಿಜಿಕುಮಾರ್. ಪಾಪಣ್ಣ. ದಿನೇಶ್. ಪ್ರಾಂಶುಪಾಲರಾದ ಪ್ರಸಾದೇ ಗೌಡ. ಕೆ ಬಿ ಮಹೇಶ್. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷರಾದ ವಿ ಲೋಕೇಶ್. ತಾಲ್ಲೂಕಿನ ಗೌರವನಿತ ಪತ್ರಕರ್ತರು, ಶಾಲಾ ಮಕ್ಕಳು, ಶಿಕ್ಷಕ ವೃಂದದವರು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
*ವರದಿ: ಸಾಯಿಕುಮಾರ್. ಎನ್.ಕೆ,*