ಕರವೇ ಕನ್ನಡಿಗರ ಬಣದಿಂದ ಪ್ರತಿಭಾ ಪುರಸ್ಕಾರಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ
ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದಿಂದ ಎಸ್. ಎಸ್. ಎಲ್. ಸಿ. ಹಾಗೂ ಪಿ. ಯು. ಸಿ. ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿಶೇಕಡಾ 85ಅಂಕ ಪಡೆದ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಶೇಕಡಾ 95ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಹೆಸರು, ಅಂಕಪಟ್ಟಿ ಜೆರಾಕ್ಸ್, ಇತ್ತೀಚಿನ ಭಾವಚಿತ್ರ, ದೂರವಾಣಿ ಸಂಖ್ಯೆಗಳನ್ನೊಳಗೊಂಡ ಅರ್ಜಿಗಳನ್ನು.. ಸಹ್ಯಾದ್ರಿ ಆಸ್ಪತ್ರೆ, ಫ್ರೆಂಡ್ಸ್ ಹಾಲ್ ಮುಂಭಾಗ, ಪಾಲನಜೋಗಿ ಹಳ್ಳಿ, ದೊಡ್ಡಬಳ್ಳಾಪುರ, ಗೌರಿಬಿದನೂರು ರಸ್ತೆ ಈ ವಿಳಾಸಕ್ಕೆ ದಿನಾಂಕ 20.6.2025 ರೊಳಗಾಗಿ ತಲುಪಿಸಲು ಕೋರಿದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 9663531611,8073452305, 0960302558, 7892408881 8660602560,ಎಂದು ಕರವೇ ಕನ್ನಡಿಗರ ಬಣದ ಸ್ಥಾಪಕಾಧ್ಯಕ್ಷ ರಾದ ಬಿ. ಎಸ್. ಚಂದ್ರಶೇಖರ್, ರಾಜ್ಯ ಪ್ರದಾನ ಕಾರ್ಯದರ್ಶಿ ಆರ್. ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.