ಎಸ್. ಎಸ್. ಎಲ್ .ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ.ಸಾ.ಪ ವತಿಯಿಂದ ಸನ್ಮಾನ

ತಾವರೆಕೆರೆ : ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪ್ರಥಮ ಭಾಷೆ ಆದಂತಹ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅರ್ಥಪೂರ್ಣ ಸನ್ಮಾನ ಸಮಾರಂಭ.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೊಸಕೋಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಚ್.ಎಂ ಮುನಿರಾಜು ಮಾತನಾಡಿ ಕನ್ನಡ ಎಂಬುದು ಕನ್ನಡ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಲ್ಲ ಪ್ರತಿದಿನ ಪ್ರತಿ ಕ್ಷಣ ಕಣಕಣದಲ್ಲೂ ಕನ್ನಡದ ಕಂಪು ಇರಬೇಕು ಈಗಿನ ವಿದ್ಯಾರ್ಥಿಗಳು ಅನ್ಯ ಭಾಷೆಗಳ ಕಡೆ ಒಲವು ತೋರುವುದನ್ನು ಬಿಟ್ಟು ಕನ್ನಡ ಭಾಷೆಯನ್ನು ಬೆಳೆಸಿ ಉಳಿಸಿ, ಅದರಲ್ಲೂ ಸರ್ಕಾರಿ ಶಾಲೆಯನ್ನು ಬೆಳೆಸುವ ಕರ್ತವ್ಯ ನಮ್ಮೆಲ್ಲರ ಹೊಣೆ ಈಗಿನ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ಓದಿ ಅತ್ಯುತ್ತಮ ಅಂಕ ಪಡೆದು ಉನ್ನತ ಸ್ಥಾನಗಳಲ್ಲಿ ಹೆಸರು ಮಾಡಬೇಕು ಆಗ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ನಮ್ಮ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುಮಾರು 45 ವರ್ಷಗಳಿಂದ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಂದಿನಿಂದ ಇಂದಿನವರೆಗೂ ಸನ್ಮಾನ ಸಮಾರಂಭ ಮಾಡಿಕೊಂಡು ಬಂದಿದ್ದಾರೆ ಅದನ್ನು ನಾವು ಸಹ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದರು.

ಹಿರಿಯ ಪತ್ರಕರ್ತರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ತಾವರೆಕೆರೆ ಟಿ.ನಾಗರಾಜ್ ಮಾತನಾಡಿ ಕನ್ನಡ ಭಾಷೆಯ ಮೆರಗೂ ಹೆಚ್ಚಿಸುವ ಪಾತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ಪಾತ್ರ ಅಪಾರ ಕನ್ನಡದ ಬಗ್ಗೆ ಉತ್ತಮ ಸಂದೇಶಗಳನ್ನು ನೀಡಿ ರಾಜ್ಯದಲ್ಲಿ ಉತ್ತಮ ಕಾರ್ಯಗಳನ್ನು ನಡೆಸಿಕೊಂಡು ಬಂದಿರುವ ಒಂದು ಉತ್ತಮ ಸಂಘಟನೆ ಎಂದರೆ ಅದು ಕನ್ನಡ ಸಾಹಿತ್ಯ ಪರಿಷತ್ ಮಾತ್ರ ಇಂದಿನ ವಿದ್ಯಾರ್ಥಿಗಳು ಹೆಚ್ಚಾಗಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಿ ಉತ್ತಮ ಅಂಕಗಳನ್ನು ಪಡೆದು ತಾಲೂಕಿನಲ್ಲಿಯೇ ತಾವರೆಕೆರೆ ಸರ್ಕಾರಿ ಶಾಲೆಯ ಘನತೆ ಗೌರವವನ್ನು ಹೆಚ್ಚಿಸಿ ರಾಜ್ಯಮಟ್ಟದಲ್ಲಿ ಹೆಸರು ಮಾಡುವಂತಹ ದಾರಿ ದೀಪಗಳು ನೀವಾಗಬೇಕು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಇದೇ ರೀತಿ ಸದಾ ನಿಮ್ಮ ಜೊತೆ ಇರುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಹೊಸಕೋಟೆ ತಾಲೂಕು ಅಧ್ಯಕ್ಷ ಎಚ್‌.ಎಂ ಮುನಿರಾಜು , ಹಿರಿಯ ಪತ್ರಕರ್ತರು ಹಾಗೂ ಮಾಜಿ ಅಧ್ಯಕ್ಷರಾದ ಟಿ.ನಾಗರಾಜ್, ಕರ್ನಾಟಕ ಕಾರ್ಯ ನಿರ್ವಹಿತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎಚ್‌ಕೆ ಮಂಜುನಾಥ್ ,ಸಂಘಟನಾ ಕಾರ್ಯದರ್ಶಿ ಮಾಕನಹಳ್ಳಿ ಮಂಜುನಾಥ್, ನಂದಗುಡಿ ಹೋಬಳಿ ಅಧ್ಯಕ್ಷ ಹರೀಶ್ , ಸಂಘಟನಾ ಕಾರ್ಯದರ್ಶಿ ಬಚ್ಚೇಗೌಡ,ಶಾಲಾ ಮುಖ್ಯ ಶಿಕ್ಷಕರಾದ ಗುಲ್ಬದಂತಾರಾ, ಸಹಶಿಕ್ಷಕರಾದ ವೀಣಾ, ಶಿಲ್ಪ, ಚೈತ್ರ ,ವಿಜಯಕುಮಾರ್ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದರು.