ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ಮತ್ತು ಪ್ರಾಣಾಯಾಮ ಶಿಬಿರಕ್ಕೆ ಚಾಲನೆ

ದೊಡ್ಡಬಳ್ಳಾಪುರ:ಜೂ. 21 ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ಮತ್ತು ಪ್ರಾಣಾಯಾಮ ಶಿಬಿರಕ್ಕೆ ಚಾಲನೆ ನೀಡಲಾಯಿತು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಒಳಾಂಗಣ ಮೈದಾನದಲ್ಲಿ ಆಯೋಜನೆ ಮಾಡಲಾದ ಶಿಬಿರವನ್ನು ಉದ್ಘಾಟಿಸಿದ ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿ, ದೊಡ್ಡಬಳ್ಳಾಪುರ ಯೋಗಕ್ಕೆ ಹೆಸರಾಗಿದ್ದು, ಅಂತಾರಾಷ್ಟ್ರೀಯ ಮಟ್ಟದ ಯೋಗದಲ್ಲಿ ಭಾಗವಹಿಸಿರುವ ಯೋಗ ಪಟುಗಳು ಇಲ್ಲಿದ್ದಾರೆ. ರಾಷ್ಟ್ರೀಯ ಮಟ್ಟದ ಕುಸ್ತಿಪಟುಗಳು, ದೇಹದಾರ್ಡ್ಯ ಪಟುಗಳಿದ್ದಾರೆ. ಆದರೆ, ಸಂವಹನದ ಕೊರತೆಯಿಂದಾಗಿ ಯೋಗ ಹಾಗೂ ವ್ಯಾಯಾಮಕ್ಕೆ ಪ್ರಚಾರ ದೊರೆಯುತ್ತಿಲ್ಲ ಎಂದು ವಿಷಾದಿಸಿದರು.
ಯೋಗದಿಂದ ನಮಗೆ ಹಲವಾರು ಪ್ರಯೋಜನಗಳಿದ್ದು, ಯೋಗಾಸವನ್ನು ನಿತ್ಯ ಅಭ್ಯಾಸ ಮಾಡಬೇಕಿದೆ. ಈ ದಿಸೆಯಲ್ಲಿ ಯೋಗದೆ
ಪ್ರಾಮುಖ್ಯತೆ ತಿಳಿಸಲು ಪ್ರತಿ ವರ್ಷ ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ನಂತರ ವಿಶ್ವ ಯೋಗ ದಿನಾಚರಣೆ ಸಮಿತಿಯ ಕಾರ್ಯದರ್ಶಿ ಬಿ.ಜಿ.ಅಮರನಾಥ್ ಮಾತನಾಡಿ, ಯೋಗ ದಿನಾಚರಣೆ ಸಮಿತಿ ವತಿಯಿಂದ ಜೂನ್
21ರಂದು ಬೆಳಗ್ಗೆ 6 ಗಂಟೆಗೆ ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿ. ಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಪೂರ್ವಭಾವಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸುವ ಮೂಲಕ ಯೋಗ ‘ವನ್ನು ಉತ್ತೇಜಿಸಬೇಕಿದೆ ಎಂದು ಸಲಹೆ ನೀಡಿದರು.

ಯೋಗ ದಿನಾಚರಣೆಯ ಶಿಷ್ಟಾಚಾರದ ಯೋಗಾಸನಗಳ ತರಬೇತಿ ನೀಡಿದ ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಸ್ವಾಮೀಜಿ, ಯೋಗ ಶರೀರ, ಮನಸ್ಸು, ಆತ್ಮಗಳ ಸಮಾಗಮವಾಗಲಿದೆ. ಯೋಗದಿಂದ ದೇಹಕ್ಕೆ ಹಾಗೂ ಮನಸ್ಸಿಗೆ ಚೈತನ್ಯ ದೊರಕುತ್ತದೆ. ಯೋಗ ನಮ್ಮ ನಿತ್ಯದ ದಿನಚರಿಯಾಗಬೇಕಿದೆ ಎಂದರು.

ಈ ವೇಳೆ ವಿಶ್ವಯೋಗ ದಿನಾಚರಣಾ ಟ್ರಸ್ಟ್ ಸಹ ಕಾವ್ಯದರ್ಶಿ ಎಂ.ಕೆ.ವತ್ಸಲ, ಖಜಾಂಚಿ ಪಿ.ಕೆ. ಶ್ರೀನಿವಾಸ್, ಸಂಚಾಲಕರರಾದ ಸೀತಾರಾಂ, ಡಿ.ವಿ.ಗಿರೀಶ್, ಡಿ.ಪಿ.ಗೋಪಾಲ್ ಹಾಜರಿದ್ದರು.