ಗಣೇಶನ ಮೆರವಣಿಗೆ ವೇಳೆ ಪಟಾಕಿ ಸಿಡಿದು ಓರ್ವ ಬಾಲಕ ಸಾವುಪೋಲಿಸ್ ಸಿಬ್ಬಂದಿ ಸೇರಿದಂತೆ ಹಲವರಿಗೆ ಗಾಯ

ದೊಡ್ಡಬಳ್ಳಾಪುರ: ನಗರದ 6ನೇ ವಾರ್ಡ್ ಮುತ್ತೂರಿನಲ್ಲಿ ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಪೋಟಗೊಂಡು ಓರ್ವ ಬಾಲಕ ಮೃತಪಟ್ಟಿದ್ದು,ಪೋಲೀಸ್ ಸಿಬ್ಬಂದಿ ಸೇರಿದಂತೆ 8 ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ ನಲ್ಲಿ ಇಂದು ಸಂಜೆ 6 ಗಂಟೆ ಸಮಯದಲ್ಲಿ ಘಟನೆ ನಡೆದಿದೆ, ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಝಾಕಿರ್ ಹುಸೇನ್ ಗಂಭೀರ ಗಾಯಗೊಂಡಿದ್ದಾರೆ, ಒರ್ವ ವಯೋವೃದ್ಧ ಮಹಿಳೆ, ಮಕ್ಕಳು ಸೇರಿದಂತೆ 8 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಕಳಿಸಲಾಗಿದೆ, ಗಂಭೀರ ಸ್ವರೂಪ ಗಾಯವಾಗಿರುವ ಹಿನ್ನಲೆ ಸಾವಿನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಸ್ಪೋಟದ ತೀರ್ವತೆಗೆ ಸುತ್ತಮುತ್ತಲಿನ ಐದಾರು ಮನೆಗಳ ಕಿಟಕಿ ಜಖಂಗೊಂಡಿದೆ.

ಮುತ್ತೂರು ವಾರ್ಡ್ ನ ಫ್ರೆಂಡ್ಸ್ ವಿನಾಯಕ ಬಳಗ ಇಂದು ಸಂಜೆ ಗಣೇಶನ ವಿಸರ್ಜನೆ ಮಾಡಲು ಮೆರವಣಿಗೆಯಲ್ಲಿ ಹೊರಟ್ಟಿದ್ದರು, ಲಿಫ್ಟ್ ವಾಹನದಲ್ಲಿ ಗಣೇಶನ ಮೆರವಣಿಗೆ ಮಾಡಲಾಗುತ್ತಿತ್ತು, ಲಿಫ್ಟ್ ವಾಹನ ಸೈಲೆಂಸರ್ ಬಳಿ ಪಟಾಕಿ ಇಡಲಾಗಿದ್ದು, ಸೈಲೆಂಸರ್ ಬಿಸಿಯ ತಾಪಕ್ಕೆ ಪಟಾಕಿ ಸ್ಪೋಟಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳಕ್ಕೆ ಡಿ.ವೈ.ಎಸ್.ಪಿ ರವಿ ಸೇರಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಸಾದಿಕ್ ಪಾಷ ಪೋಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತಿದ್ದಾರೆ.