ನೇಹಾ ಹೀರೇಮಠ ಹತ್ಯೆ ಖಂಡಿಸಿ ದೊಡ್ಡಬಳ್ಳಾಪುರ ಬಿ ಜೆ ಪಿ ಪ್ರತಿಭಟನೆ
ದೊಡ್ಡಬಳ್ಳಾಪುರ: ನೇಹಾ ಹತ್ಯೆ ಖಂಡಿಸಿ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ನಗರದ ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶ ವಿರೋಧಿ ಹಿಂದೂ ವಿರೋಧ ಚಟುವಟಿಕೆಗಳು ಹೆಚ್ಚಾಗಿ ಶಾಂತಿ ಸೌಹಾರ್ದತೆ ಕದಡುತ್ತಿದೆ,ಭಯೋತ್ಪಾದಕತೆ ಹೆಚ್ಚಾಗುತ್ತಿದೆ, ,ಹಿಂದೂಗಳ ಮೇಲೆ ದಬ್ಬಾಳಿಕೆ ಕೊಲೆಯಂತಹ ಪ್ರಕರಣಗಳು ಮರುಕಳಿಸುತ್ತಿವೆ ಎಂದು ಕಾಂಗ್ರೆಸ್ ಸರ್ಕಾರದ ವಿರಿದ್ದ ಶಾಸಕ ಧೀರಜ್ ಮುನಿರಾಜು ಕಿಡಿಕಾಡಿದರು.
ನೇಹಾಳನ್ನು ಹತ್ಯೆ ಮಾಡಿದ ಕಿಡಿಗೇಡಿಗಳನ್ನು ಸಾರ್ವಜನಿಕವಾಗಿ ಶಿಕ್ಷೆ ನೀಡಬೇಕು ರಾಜ್ಯದಲ್ಲಿ ಇಂತಹಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮವಹಿಸಬೇಕು ಹೆಣ್ಣು ಮಕ್ಕಳ ಗೌರವ ಉಳಿಸುವವರೆಗೆ ಬಿಜೆಪಿ ಪ್ರತಿಭಟನೆ ನಡೆಸುತ್ತಲೇ ಇರುತ್ತದೆ ಎಂದು ತಿಳಿಸಿದರು.
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕವಾಗಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಸಬಲರಾಗಬೇಕೆಂದು ಬಿಜೆಪಿ ಹಲವು ಯೋಜನೆಗಳನ್ನು ಜಾರಿಗೆ ತರಲಾಗಿದೆ ಆದರೆ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಅನುಕೂಲವಾಗುವ ಯಾವುದೇ ಯೋಜನೆ ಜಾರಿ ಮಾಡುತ್ತಿಲ್ಲ ಎಂದು ಗುಡುಗಿದರು.
ಈ ವೇಳೆ ಬಿಜೆಪಿ ಮುಖುಂಡರು,ಬಜರಂಗ ದಳದ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.