ಯು ಜಿ ಡಿ ಸಮಸ್ಯೆ ಬಗೆಹರಿಸಲು ನಗರಸಭೆ ಮುಂದೆ ಪ್ರತಿಭಟನೆ.
ದೊಡ್ಡಬಳ್ಳಾಪುರ :ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಚಂದ್ರಮೌಳೇಶ್ವರ ಲೇಔಟ್ ನ ಸಾರ್ವಜನಿಕರು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.ಕಳೆದ 2020ನೇ ಇಸವಿಯಿಂದ ನಿರಂತರವಾಗಿ ನಗರಸಭೆಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗುತ್ತಿಲ್ಲ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ವಸಂತ್ ಕುಮಾರ್ ಮಾತನಾಡಿ ಮಳೆಗಾಲದಲ್ಲಿ ನಮಗೆ ಹೆಚ್ಚಾಗಿ ಈ ಸಮಸ್ಯೆ ಉಲ್ಬಾಣವಾಗುತ್ತದೆ. ಸಂಬಂಧಪಟ್ಟ ನಗರಸಭಾ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ತಾತ್ಕಾಲಿಕವಾಗಿ ಎಸ್ ಟಿ ಪಿ ಘಟಕವನ್ನು ಸರಿ ಪಡಿಸುವ ಮೂಲಕ ಜಾರಿಕೊಳ್ಳುವ ಅಧಿಕಾರಿಗಳು ನಮಗೆ ಶಾಶ್ವತ ಪರಿಹಾರ ಕೊಡುವಲ್ಲಿ ವಿಫಲರಾಗಿದ್ದಾರೆ. ನಮಗೆ ಕೊಳಚೆ ನೀರಿನ ಸಮಸ್ಯೆಯಿಂದ ಶಾಶ್ವತ ಪರಿಹಾರ ಬೇಕಿದೆ. ಕೊಳಚೆ ನೀರು ಮನೆಯ ಮುಂಭಾಗ ಹರಿಯುವ ಕಾರಣ ಮಕ್ಕಳಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಸಮಸ್ಯೆಯನ್ನು ಅರಿತು ನಗರಸಭಾ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದರು.
ಸ್ಥಳೀಯಯರಾದ ಸೌಮ್ಯ ಮಾತನಾಡಿ ಮಳೆ ಹೆಚ್ಚಾದಲ್ಲಿ ಕೊಳಚೆ ನೀರು ಮನೆಗೆ ನುಗ್ಗುತಿದೆ. ನೀರಿನ ಕೆಟ್ಟವಾಸನೆಯಿಂದಾಗಿ ಮನೆಯಲ್ಲಿ ಊಟ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಸಮಸ್ಯೆ ಅಧಿಕಾರಿಗಳ ಕಣ್ಣಿಗೆ ಕಾಣುತಿಲ್ಲ. ಮತ ಕೇಳಲು ಬರುವ ಜನಪ್ರತಿನಿಧಿಗಳು ಮೌನವಹಿಸಿರುವುದು ಸರಿಯಲ್ಲ. ನಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ಎಂಬುದೇ ನಮ್ಮೆಲ್ಲರ ಒತ್ತಾಯ ಎಂದರು.
ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ವಡ್ಡರಹಳ್ಳಿ ಮಾತನಾಡಿ ಈ ಬಡಾವಣೆಯು 2005 ರಲ್ಲಿ ಮಾಡಲಾಗಿದ್ದು ಬಡಾವಣೆಯ ನಿರ್ಮಾಣದ ಸಂದರ್ಭದಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಮಾಡಿದ್ದು. ಬಡಾವಣೆ ತಗ್ಗಿನಲ್ಲಿರುವ ಕಾರಣ ಕೊಳಚೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ಪರಿಹರಿಸಲು ಸ್ಥಳೀಯವಾಗಿ ಎಸ್ ಟಿ ಪಿ ಘಟಕದ ಸ್ಥಾಪನೆ ಮಾಡಿದ್ದು ಮಳೆ ಹೆಚ್ಚಾದಾಗ ಈ ಘಟಕವು ಸಂಪೂರ್ಣ ತುಂಬಿಹೋಗುತ್ತದೆ. ನೀರಿನ ಹರಿವು ಸರಾಗವಾಗಿ ಆಗದ ಕಾರಣ ಸೈಟ್ ಗಳಲ್ಲಿ ಹುಕ್ಕುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಸರ್ಕಾರಕ್ಕೆ 3 ಹಂತದ ಒಳಚರಂಡಿ ಯೋಜನೆಯಲ್ಲಿ ಪ್ರಸ್ತವನೆ ಸಲ್ಲಿಸಿದ್ದು. ಸರ್ಕಾರದ ಅನುಮೋದನೆ ದೊರೆತ ಕೂಡಲೇ ಕಾಮಗಾರಿ ಕೈಗೊಳ್ಳಲಾಗುವುದು ಅಲ್ಲಿಯವರೆಗೂ ನಗರಸಭೆ ವತಿಯಿಂದ ಸ್ಥಳೀಯರಿಗೆ ತಾತ್ಕಾಲಿಕವಾಗಿ ಪರಿಹಾರ ನೀಡಲು ಸಹಕರಿಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಬಡಾವಣೆ ನಿವಾಸಿಗಳಾದ ರವಿಕುಮಾರ್, ವಸಂತ್, ನಾಗೇಶ್, ಸೌಮ್ಯ, ರವಿ, ಮಂಜುಳಾ, ಪ್ರಿಯಾಂಕಾ, ಶ್ರೀನಿವಾಸ್, ಮುಂತಾದವರು ಇದ್ದರು.