ಎತ್ತಿನಹೊಳೆ ಕಾಮಾಗಾರಿ-ಗುತ್ತಿಗೆದಾರನ ನಿರ್ಲಕ್ಷಕ್ಕೆ ಕಾರ್ಮಿಕ ಸಾವು

ದೊಡ್ಡಬಳ್ಳಾಪುರ : ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಅಳವಡಿಸುವ ವೇಳೆ ಅವಘಡ ಸಂಭವಿದ್ದು, ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದ ಸಮೀಪ ನಡೆದಿದೆ.

ಬಿಹಾರ ರಾಜ್ಯದ ನೆತ್ಯಾಳಿ ಮೂಲದ ಚಿಂಟು ಕುಮಾರ್ (22) ಮೃತಪಟ್ಟ ಕಾರ್ಮಿಕ.

ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಅಳವಡಿಸುವ ವೇಳೆ ಅವಘಡ- ಎರಡು ಪೈಪುಗಳು ನಡುವೆ ಸಿಲುಕಿ ಕಾರ್ಮಿಕ ಚಿಂಟು ಕುಮಾರ್ ಸಾವನ್ನಪ್ಪಿದ್ದಾನೆ.

ವಿಷಯ ತಿಳಿದ ಸ್ಥಳೀಯರು ದೊಡ್ಡಬೆಳವಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಪಿ. ರವಿ, ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ನಿರ್ಲಕ್ಷತೆ ಬಗ್ಗೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ