ವಾಣಿವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಅನಿಶ್ ಆರಾಧ್ಯಗೆ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ ಕನಸವಾಡಿಯಲ್ಲಿ,ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆಯಿಂದ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪದವಿಪೂರ್ವ ಕಾಲೇಜಿನ ಶ್ರೀ ವಾಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅನೀಶ್ ಆರಾಧ್ಯ ಬಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶ್ರೀ ವಾಣಿ ವಿದ್ಯಾಸಂಸ್ಥೆಯ ಪ್ರಾಂಶುಪಾಲ ವೇಣುರವರು ಮತ್ತು ಯೋಗ ತರಬೇತುದಾರ ಎಚ್ಎಸ್ ರಾಮಕೃಷ್ಣನ್ ಅವರು ಹಾಗೂ ಯೋಗ ನಟರಾಜ್ ರವರು ಮತ್ತು ನಗರಸಭಾ ನಿಕಟ ಪೂರ್ವ ಅಧ್ಯಕ್ಷರಾದ ಸುಧಾ ಲಕ್ಷ್ಮೀನಾರಾಯಣ್ ರವರು ಅಭಿನಂದಿಸಿದ್ದಾರೆ