ರಾಜ್ಯಪಾಲರು ರಾಜೀನಾಮೆ ನೀಡಿ ಬೇರೆ ರಾಜ್ಯಕ್ಕೆ ಹೋಗಲಿ– ರಾಜಘಟ್ಟ ನಾರಾಯಣಸ್ವಾಮಿ
ದೊಡ್ಡಬಳ್ಳಾಪುರ :ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ದ ನೀಡಿದ ಕಾನೂನು ಕ್ರಮ ಖಂಡಿಸಿ ರಾಜಭವನ ಚಲೋ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರಾಜಘಟ್ಟ ನಾರಾಯಣಸ್ವಾಮಿಯವರು ಮಾತನಾಡಿ,ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ರಾಜ್ಯಪಾಲರು ಕರ್ನಾಟಕ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಬೇರೆ ರಾಜ್ಯಕ್ಕೆ ಹೋಗುವಂತೆ ಆಗ್ರಹಿಸಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನಡೆ, ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಕುತಂತ್ರವನ್ನು ಖಂಡಿಸಿ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು. ದೊಡ್ಡಬಳ್ಳಾಪುರದಿಂದ ಹೋರಾಟ ಪ್ರತಿಭಟನಾ ತಂಡದ ನೇತೃತ್ವವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣಸ್ವಾಮಿ ವಹಿಸಿಕೊಂಡಿದ್ದರು.
ದೊಡ್ಡಬಳ್ಳಾಪುರ ದಿಂದ ಹೊರಡುವ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ತೇಜೋವಧೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ಹಿಂದುಳಿದ ಜಾತಿಗಳ ಒಕ್ಕೂಟ ಹಾಗೂ ಕಾಂಗ್ರೆಸ್ ವತಿಯಂದ ರಾಜಭವನ ಚಲೋಗೆ ಕರೆ ನೀಡಲಾಗಿದೆ, ವಾರದ ಹಿಂದೆ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿ ಮುಂದೆ ರಾಜ್ಯಪಾಲರ ದೋರಣೆ ವಿರುದ್ದ ಪ್ರತಿಭಟನೆ ನಡೆಸುವ ಮೂಲಕ ಸಿದ್ದರಾಮಯ್ಯ ವಿರುದ್ಧ ನೀಡಿರುವ ಆದೇಶವನ್ನು ಹಿಂತೆಗೆದು ಕೊಳ್ಳುವಂತೆ ಆಗ್ರಹಿಸಲಾಗಿತ್ತು.ರಾಜ್ಯಪಾಲರು ಪ್ರಾಸಿಕ್ಯೂಷನ್ ವಾಪಸ್ ಪಡೆಯದ ಹಿನ್ನಲೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಹಾಗೂ ಜಿಲ್ಲಾ ಅಧ್ಯಕ್ಷ ಸಿ.ಆರ್.ಗೌಡರ ಆದೇಶದ ಮೇರೆಗೆ ದೊಡ್ಡಬಳ್ಳಾಪುರದಿಂದ ರಾಜಭವನ ಮುತ್ತಿಗೆ ಹಾಕಲು ನಾವು ಹೊರಟ್ಟಿದ್ದೇವೆ ಎಂದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ, ಅವರಿಗೆ ಕರ್ನಾಟಕದ ರಾಜ್ಯಪಾಲರಾಗುವ ಗೌರವವಿಲ್ಲ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರೇ ಹೇಳಿದ್ದಾರೆ, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರ ಪಾತ್ರವಿಲ್ಲ ವೆಂದು, ಆದರು ಸಹ ರಾಜ್ಯಪಾಲರು ದ್ವೇಷ ರಾಜಕಾರಣವನ್ನು ಮಾಡುತ್ತಿದ್ದಾರೆ, ಕರ್ನಾಟಕ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿ ಬೇರೆ ರಾಜ್ಯಕ್ಕೆ ಹೋಗುವಂತೆ ಆಗ್ರಹಿಸಿದರು. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಕೇಸ್ ವಾಪಸ್ ತೆಗೆದು ಕೊಳ್ಳದಿದ್ದರೆ, ಬೂತ್ ಮಟ್ಟದಿಂದ ಹಿಡಿದು ತಾಲೂಕು ಮಟ್ಟದವರೆಗೂ ಉಪವಾಸ ಸತ್ಯಾಗ್ರಹ ನೆಡೆಸಲಾಗುವುದಾಗಿ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಆರ್.ಎಸ್.ರಾಜಣ್ಣ, ಕಾಂಗ್ರೆಸ್ ಸೇವಾದಳ ಕಸಬಾ ಅಧ್ಯಕ್ಷ ಗಂಗರಾಜು, ಕಾಂಗ್ರೆಸ್ ಯುವ ಮುಖಂಡ ಆರ್.ಎಸ್.ಮೈಲಾರಪ್ಪ, ದಾಸಗೊಂಡನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುಮಂತ್ ಗೌಡ, ತಿಮ್ಮಸಂದ್ರ ಗ್ರಾಮ ಪಂಚಾಯತ್ ಸದಸ್ಯ ರಘು, ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ರವಿಯಣ್ಣ ಸೇರಿದಂತೆ ರಾಜಘಟ್ಟ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.