ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್ ಶ್ರೀಕಾಂತ್ ಅವಿರೋಧ ಆಯ್ಕೆ

ವಿಜಯನಗರ:ವಿಜಯನಗರಜಿಲ್ಲೆ ಕೊಟ್ಟೂರು ತಾಲೂಕು ನಿಂಬಳಗೆರೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷರಾಗಿ ಎಸ್. ಶ್ರೀಕಾಂತ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಇದ್ದ ಅಧ್ಯಕ್ಷ ಎಂ. ಮಹಾಂತೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಗ್ರಾಮ ಪಂಚಾಯ್ತಿ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಎಸ್. ಶ್ರೀಕಾಂತ ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಇದರಿಂದ ಶ್ರೀಕಾಂತ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಕೊಟ್ಟೂರು ತಹಶೀಲ್ದಾರ್ ಅಮರೇಶ್ ಅವರು ಘೋಷಣೆ ಮಾಡಿದರು. ಹಾಲಿ ಉಪಾಧ್ಯಕ್ಷೆ ಕೆ. ಮಂಗಳಮ್ಮ ಸೇರಿದಂತೆ 20 ಸದಸ್ಯರು ಪಾಲ್ಗೊಂಡಿದ್ದರು. ಪಿಡಿಒ ಪ್ರಶಾಂತ ಕುಮಾರ್ ಹಾಗೂ ಸಿಬ್ಬಂದಿ ಮತ್ತು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರಮುಖರು ಇದ್ದರು.