ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಿ ತಾರತಮ್ಯದ ವಿರುದ್ಧ ಮಂಜಪ್ಪ : ಆಕ್ರೋಶ
ದೇವನಹಳ್ಳಿ :- ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಪಟ್ಟಣದ ಕಚೇರಿ ಆವರಣದಲ್ಲಿ ಕಪ್ಪುಪಟ್ಟಿ ಧರಿಸಿ ಗುರುವಾರ ನಡೆಯಿತು.
ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಮಂಜು ನಾಥ್, ಕರ್ನಾಟಕ ರಾಜ್ಯ ನೀರು ಸರಬರಾಜು ನೌಕರರ ಸಂಘ ದಿಂದ ಏರ್ಪಡಿಸಲಾಗಿದ್ದ ಪ್ರತಿಭ ಟನೆಯಲ್ಲಿ ಭಾಗವಹಿಸಿ ಸಂಘದ ಅಧ್ಯಕ್ಷ ಮಂಜಪ್ಪ ಮಾತನಾಡಿ ಅವರು, ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿ ಸಬೇಕು. ನೀರು ಸರಬರಾಜುದಾರರು ಹಾಗೂ ವಾಹನ ಚಾಲಕರು ಜೀವನ ಭದ್ರತೆಯಿಲ್ಲದೆ ಅನೇಕ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು.
ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಸಿಗುತ್ತಿಲ್ಲ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಿದೆ. ಜ್ಯೋತಿ ಸಂಜೀವಿನಿ ಯೋಜನೆ ಪೌರ ಕಾರ್ಮಿಕರಿಗೆ ಸಿಗಬೇಕು. ಗುತ್ತಿಗೆ ಹೊರ ಗುತ್ತಿಗೆ ಬದಲು ನೇರ ಪಾವತಿಯಾಗಬೇಕು.
ಬಿಬಿಎಂಪಿಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಯಂಗೊಳಿಸಿದ್ದು, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರನ್ನು ನಿರ್ಲಕ್ಷಿಸಿರುವುದು ಯಾವ ನ್ಯಾಯ ವೆಂದ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.
ಪೌರಕಾರ್ಮಿಕರ ವಿವಿಧ ಬೇಡಿಕೆಯ ಪತ್ರವನ್ನು ಮುಖ್ಯಾಧಿಕಾರಿ ದೊಡ್ಡಮಲ್ಲಯ್ಯ ಅವರಿಗೆ ಸಂಘದ ಪದಾಧಿಕಾರಿಗಳು ನೀಡಿದರು.
ಮನವಿ ಪತ್ರ ಪಡೆದ ಮುಖ್ಯಾಧಿಕಾರಿ ದೊಡ್ಡಮಲ್ಲಯ್ಯ ಮಾತನಾಡಿದ ಪೌರಕಾರ್ಮಿಕರ ನಾನಾ ಬೇಡಿಕೆಗಳ ಸಂಬಂಧ ಪತ್ರವನ್ನು ಸಲ್ಲಿಸಿದ್ದು ಸಂಬಂಧ ಪಟ್ಟ ಮೇಲಾಧಿಕಾರಿಗಳಿಗೆ ಸಲ್ಲಿಸುವೆ ಘನ ಸರ್ಕಾರದಿಂದ ಅವರ ಬೇಡಿಕೆಯ ಪತ್ರವನ್ನು ಪರಿಗಣಿಸಿ ಅನುಷ್ಠಾನಕ್ಕೆ ಬರಲೆಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ನೀರು ಸರಬರಾಜು ನೌಕರರ ಸಂಘದ ಪದಾಧಿಕಾರಿಗಳಾದ ಮಂಜುನಾಥ್ ಅನಿಲ್, ಮುನಿರಾಜು, ಅಶ್ವಥ್ ನಾರಾಯಣ್, ಗಡ್ಡ ಮುನಿರಾಜು, ಶಿವಮೂರ್ತಿ, ಸರಸ್ವತಿ, ಕೃಷ್ಣಪ್ಪ, ನಾರಾಯಣಸ್ವಾಮಿ, ವೆಂಕಟೇಶ್, ಮಂಜುನಾಥ್, ಎಂ ಅನಿಲ್ ಕುಮಾರ್, ಸುರೇಶ್, ಮುನಿರಾಜು, ಗಜೇಂದ್ರ, ಸರಸ್ವತಿ, ಮತಿತರರು ಹಾಜರಿದ್ದರು.