ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕೊಡುಗೆಗಳೇ ಬಮುಲ್ ಕ್ಷೇತ್ರಕ್ಕೆ ಎಸ್ ಪಿ ಮುನಿರಾಜು ಗೆಲುವಿಗೆ ದಿಕ್ಸೂಚಿಯಾಗಿದೆ
ದೇವನಹಳ್ಳಿ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಹೆಚ್ಚಿನ ಅನುದಾನ ನೀಡುವ ಮೂಲಕ ಹೈನುಗಾರಿಕೆ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಕೆಪಿಸಿಸಿ ಪರಿಶಿಷ್ಟ ಪಂಗಡ ವಿಭಾಗದ ಸದಸ್ಯ ದೊಡ್ಡ ತತ್ತಮಂಗಲ ರಮೇಶ ಅವರು ಅಭಿಪ್ರಾಯಿಸಿದರು.
ದೇವನಹಳ್ಳಿ ಪಟ್ಟಣದಲ್ಲಿ ತಾಲೂಕು ವಾಲ್ಮೀಕಿ ಸಮುದಾಯದವರು ಹಾಗೂ ಕಾಂಗ್ರೆಸ್ ಮುಖಂಡರಿಂದ ಗೌತಮ ಬುದ್ಧನ ಸ್ಮರಣ ಪ್ರತಿಮೆಯನ್ನು ನೀಡುವ ಮೂಲಕ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಮೂಲ್ ನಿರ್ದೇಶಕ ಸ್ಥಾನಕ್ಕೆ ಎಸ್ ಪಿ ಮುನಿರಾಜು ಅವರ ಗೆಲುವು ಅತ್ಯವಶ್ಯಕವಾಗಿತ್ತು.
ಜೆಡಿಎಸ್ ಪಕ್ಷದಲ್ಲಿ ತಮ್ಮದೇ ಸರ್ವಾಧಿಕಾರಿ ಧೋರಣೆ ಹೇಳತೀರದಾಗಿತ್ತು. ಈ ಚುನಾವಣೆಯ ಫಲಿತಾಂಶ ಮುಂಬರುವ ತಾಲೂಕ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಗೆಲುವು ತಂದುಕೊಡಲು ಈ ಫಲಿತಾಂಶ ಸಾಕ್ಷಿಯಾಗಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಲು ಮತ್ತು ಈ ರೇಷ್ಮೆಯಿಂದ ನಮ್ಮಲ್ಲಿನ ರೈತರು ಆರ್ಥಿಕ ಬದುಕನ್ನು ಕಟ್ಟಿಕೊಂಡಿದ್ದು ಗುಣಮಟ್ಟದ ಹಾಲು ಸರಬರಾಜು ಮಾಡುವ ಉತ್ಪಾದಕರಿಗೆ ಕಾಲಕಾಲಕ್ಕೆ ಜಾನುವಾರುಗಳ ತಪಸಣೆ ಶಿಬಿರ, ಇಂಡಿ, ಬೂಸಾ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ವಿಮಾ ಸೌಲಭ್ಯಗಳನ್ನು ಒದಗಿಸಿ
ಕೊಡಲು ತಮ್ಮ ಮೇಲೆ ಹೆಚ್ಚಿನ ಜವಾಬ್ದಾರಿಯನ್ನು ಹಾಲು ಉತ್ಪಾದಕರು ವಹಿಸಿದ್ದಾರೆ ಅವರ ನಿರೀಕ್ಷೆಗಳಿಗಿಂತ ಹೆಚ್ಚು ಅಭಿವೃದ್ಧಿಗೆ ಉತ್ತೇಜನ ನೀಡುವಂತೆ ನೂತನ ಬಮೂಲ್ ನಿರ್ದೇಶಕರಿಗೆ ಮನವಿ ಮಾಡುತ್ತೇನೆ.
ಈ ಸಂದರ್ಭದಲ್ಲಿ ದೇವನಹಳ್ಳಿ ಪುರಸಭಾಧ್ಯಕ್ಷ ಮುನಿಕೃಷ್ಣ, ಕಾಂಗ್ರೆಸ್ ಮುಖಂಡ ಯಲಿಯೂರು ಈರಣ್ಣ, ದೊಡ್ಡ ಚೀಮನಹಳ್ಳಿ ದೇವರಾಜು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದಿನ್ನೂರು ವೆಂಕಟೇಶ್, ಬೊಮ್ಮನಹಳ್ಳಿ ನಾರಾಯಣಸ್ವಾಮಿ, ಒಳಗೊಂಡಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.