ಸೆಸ್ಕ್ ಸಹಾಯಕ ತಿಮ್ಮರಾಜುಗೆ ಆತ್ಮೀಯ ಬೀಳ್ಕೊಡುಗೆ

ಚಾಮರಾಜನಗರ: ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಪ ವಿಭಾಗ ಕಚೇರಿಯಲ್ಲಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ತಿಮ್ಮರಾಜು ಅವರಿಗೆ ಕಚೇರಿ ಸಿಬ್ಬಂದಿಗಳು ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.

ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರಳ ಸಮಾರಂಭದಲ್ಲಿ ತಿಮ್ಮರಾಜು ಅವರಿಗೆ ಮೈಸೂರು ಪೇಟಾ ತೋಡಿಸಿ, ಶಾಲು ಹೊದಿಸಿ ಫಲ ತಾಂಬೂಲ ನೀಡಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಭಾಗ ಕಚೇರಿಯ ಲೆಕ್ಕಾಧಿಕಾರಿ ಭಾಸ್ಕರ್ ಅವರು ಮಾತನಾಡಿ, ದಿನಗಳು ಕಳೆದಂತೆ ಹೊಸ ಹೊಸ ತಂತ್ರಜ್ಞಾನಗಳು ಬರುತ್ತಿದೆ, ಅದಕ್ಕೆ ಹೊಂದಿಕೊಂಡು ಎಲ್ಲರೂ ಕೆಲಸ ಮಾಡುವ ಮೂಲಕ ನಿಗಮಕ್ಕೆ ಉತ್ತಮ ಹೆಸರು ತರಬೇಕೆಂದು ಸಲಹೆ ನೀಡಿದ ಅವರು ತಿಮ್ಮರಾಜು ಅವರು ತಮ್ಮ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಣೆ ಮಾಡಲಾಗಿದ್ದು ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳಾದ ಮಹೇಶ್, ಸುರೇಶ್, ಧ್ರುಪದ್, ಜೂನಿಯರ್ ಇಂಜಿನಿಯರ್ ಸಿದ್ದರಾಜಪ್ಪ, ಸಹಾಯಕ ಲೆಕ್ಕಾಧಿಕಾರಿಗಳಾದ ಮಂಗಳಾಂಬ ಹಾಗೂ ಮಂಜು, ಮುರಳಿಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ ಆರ್ ಉಮೇಶ್ ಮಲಾರಪಾಳ್ಯ