ವಸತಿ ಶಾಲೆಗಳ ನೌಕರರ ಸಂಘದಿಂದ ತುಮಕೂರು ಜಿಲ್ಲಾ ಘಟಕದಿಂದ ಜಾಥಾ

ತುಮಕೂರು: ಸಮಾಜ ಕಲ್ಯಾಣ ಇಲಾಖೆಯ ಅಧೀನದ ಕ್ರೈಸ್ಟ್ ವಸತಿ ಶಾಲೆಗಳ ಕಾಯಂ ಶಿಕ್ಷಕರು ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು. ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ (ಬಿ.ಜಿ.ಎಸ್. ವೃತ್ತ) ಮುಂಭಾಗದಿಂದ ಕೆ. ಆರ್. ಟಿ. ಸಿ. ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಬೃಹತ್ ಜಾಥಾ ನಡೆಸಿ. ಜಿಲ್ಲಾಧಿಕಾರಿಗಳಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ವಸತಿ ಶಾಲೆಗಳ ಸಂಘದ ತುಮಕೂರು ಜಿಲ್ಲಾ ಅಧ್ಯಕ್ಷರಾದ ಜನಾರ್ಧನ್ ರವರು ಮಾತನಾಡಿ: ಸರಕಾರಕ್ಕೆ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಮಾಡುವುದು. ಜ್ಯೋತಿ ಸಂಜೀವಿನಿ ಅನುಷ್ಠಾನ ಮಾಡುವುದು. ಮರಣ ಮತ್ತು ನಿವೃತ್ತಿ ಉಪಧಾನ ಸೌಲಭ್ಯ ಒದಗಿಸುವುದು. ಮನೆ ಬಾಡಿಗೆ ಕಡಿತದಿಂದ ವಿನಾಯತಿ ನೀಡುವುದು. ಹತ್ತು ಪರ್ಸೆಂಟ್ ವಿಶೇಷ ಭತ್ಯ ಮುಂಜೂರಾತಿ ಸೇರಿ ಒಟ್ಟು ಐದು ಪ್ರಮುಖ ಬೇಡಿಕೆಗಳನ್ನು ನಮ್ಮದಾಗಿದ್ದು. ಇವುಗಳನ್ನು ಆದಷ್ಟು ಬೇಗ ಸರ್ಕಾರ ಈಡೇರಿಸಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆಂದು ತಿಳಿಸಿದರು.

ಮುಂದುವರೆದು ಮಾತನಾಡುತ್ತಾ ನಾವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರು ಇದುವರೆಗೂ ಪರಿಹಾರ ಸಿಕ್ಕಿರುವುದಿಲ್ಲ. ಆದ್ದರಿಂದ ನಮ್ಮ ಸಂಘದ ವತಿಯಿಂದ ಕಳೆದ ವಾರ ಅಂದರೆ ಮೇ 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಸವಿದಾನಾತ್ಮಕ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಆದರೂ ರಾಜ್ಯ ಸರ್ಕಾರವು ಯಾವುದೇ ಸ್ಪಂದನೆಯನ್ನು ನೀಡದ ಕಾರಣ. ಆರ್. ಎಸ್‌.ಇ.ಎ. ಹಾಗೂ ಕ್ರೈಸ್ಟ್ ನೌಕರರ ಒಕ್ಕೂಟವು ಜಿಲ್ಲಾ ಮಟ್ಟದ ಹೋರಾಟಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ. ನಾವು ತುಮಕೂರು ಜಿಲ್ಲೆಯ ಎಲ್ಲಾ ವಸತಿ ಶಾಲೆಯಲ್ಲಿನ ಕಾಯಂ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ತಮ್ಮ ವೃತ್ತಿಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಯಿತು. ಅದರ ಭಾಗವಾಗಿ ಶುಕ್ರವಾರ ತರಗತಿಗಳನ್ನು ಬಹಿಷ್ಕಾರ ಮಾಡಿ ಅಸಹಕಾರ ವ್ಯಕ್ತಪಡಿಸಲಾಗಿತ್ತು.

ನಂತರ ಪಾದಯಾತ್ರೆ ಮೂಲಕ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದೇನೆ ಸೋಮವಾರ ತುಮಕೂರು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಬಾಗದಲ್ಲಿ ತರತಿಗಳನ್ನು ಬಯಷ್ಕರಿಸಿ ಧರಣಿ ಸತ್ಯಾಗ್ರಹ ನಡೆಸುತ್ತೇವೆಂದು ತಿಳಿಸಿದರು. ಸಂದರ್ಭದಲ್ಲಿ ಅಧ್ಯಕ್ಷರಾದ ಜನಾರ್ಧನ್ N. ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಹೆಚ್. ಬಿ. ಉಪಾಧ್ಯಕ್ಷರಾದ ರಮೇಶ್ ಸಿ.ಎಂ. ಗೌರವಾಧ್ಯಕ್ಷರಾದ ಜಿತೇಂದ್ರ . ಸೇರಿದಂತೆ ನೂರಾರು ಸಂಖ್ಯೆಯ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

ವರದಿ ಭರತ್ ಕೆ