ಸರ್ಕಾರದ ವಿವಿಧ ಕಲಿಕಾ ಸೌಲಭ್ಯ ಪಡೆದು ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಹೊಂದಲು ರಾಧಾಕೃಷ್ಣ ಕರೆ

ದೇವನಹಳ್ಳಿ :- ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡುಲು ಅವಕಾಶವಿದೆ.  ಸರ್ಕಾರಿ ಶಾಲೆಗಳ ಮಕ್ಕಳಿಗೆ ಶಿಕ್ಷಣ ಪಡೆಯಲು ಸಹಾಯವಾಗುತ್ತದೆ ಶಾಲೆಗಳು ಆರಂಭವಾಗುವ ಮೊದಲು ಅಥವಾ ನಂತರ ಸರ್ಕಾರ ಈ ಪುಸ್ತಕಗಳನ್ನು ವಿತರಿಸುತ್ತದೆ ಉಚಿತ ಪಠ್ಯಪುಸ್ತಕ ವಿತರಣೆಯು ಮಕ್ಕಳಿಗೆ ಆರ್ಥಿಕವಾಗಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಲು ಸಹಾಯವಾಗಲಿದೆ ಎಂದು ಚನ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಹೇಳಿದರು.

ದೇವನಹಳ್ಳಿ ತಾಲೂಕಿನ ಚಂದ್ರಪಟ್ಟಣ ಹೋಬಳಿಯ ಚನ್ನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪಠ್ಯ ಪುಸ್ತಕ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದು ಒಳ್ಳೆಯ ಪದವಿಗಳನ್ನು ಪಡೆದು ಶಾಲೆ ಹಾಗೂ ಗ್ರಾಮಕ್ಕೆ ಒಳ್ಳೆ ಕೀರ್ತಿ ತರಬೇಕು . ಬಡತನ ರೇಖೆಗಿಂತ ಕೆಳಗಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರ ಶಿಕ್ಷಣದ ಅನುಕೂಲಕ್ಕಾಗಿ ಹಾಗೂ ಕಲಿಕೆಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ ಮಕ್ಕಳು ಇದರ ಸದುಪಯೋಗಪಡಿಸಿಕೊಳ್ಳಬೇಕು.

ಇತ್ತೀಚಿನ ದಿನಗಳಲ್ಲಿ ಮಕ್ಕಳ ಪೋಷಕರು ಆಂಗ್ಲ ಭಾಷೆ ಮೂಲಕ ಖಾಸಗಿ ಶಾಲೆಗಳ ವ್ಯಾಮೋಹ ಹೆಚ್ಚಾಗುತ್ತಿದ್ದು ಅದರಿಂದ ಹೊರಬಂದು ಗುಣಮಟ್ಟದ ನುರಿತ ಶಿಕ್ಷಕರ ಬೋಧನೆಯಿಂದ ಕೂಡಿದ ಸರ್ಕಾರಿ ಶಾಲೆಗಳಿಗೆ ಸೇರಿಸಿ ತಮಗೂ ಕೂಡ ಹೆಚ್ಚು ಶಿಕ್ಷಣದ ಹೊರೆ ಆಗದು ಜೊತೆಗೆ ಸರ್ಕಾರದಿಂದ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿದ್ಯಾರ್ಥಿ ವೇತನ, ಮಧ್ಯಾಹ್ನದ ಬಿಸಿಯೂಟ, ದೊರೆಯಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷರಾದ ಶಶಿಕಲಾ ಮುನಿರಾಜ್,
ಹಾಲು ಉತ್ಪಾದಕರ ಸಹಕಾರ ಸಂಘದ
ಅಧ್ಯಕ್ಷ ಹರಳೂರು ನರಸಿಂಹಯ್ಯ, ಮುಖಂಡರಾದ ಶ್ರೀನಿವಾಸ, ಮುನಿರಾಜು, ಶಾಲಾ ಮುಖ್ಯ ಶಿಕ್ಷಕಿ ಸುರೇಖಾ, ಹಾಗೂ ಶಿಕ್ಷಕರು ಮಕ್ಕಳ ಪೋಷಕರು ಹಾಜರಿದ್ದರು.