ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಗೃಹ ಸಚಿವರ ಬೇಟಿ
ತುಮಕೂರು: ಕ್ಯಾತ್ಸಂದ್ರದ ಮೈದಾಳ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನಿಲಯದ ಮೂಲಭೂತ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದ್ದರು. ಹಾಗೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯರಿಗೆ ಊಟದ ವ್ಯವಸ್ಥೆ, ಶುಚಿತ್ವ, ಲೈಬ್ರರಿ, ಕಂಪ್ಯೂಟರ್ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಪರಿಶೀಲನೆ ಮಾಡುವುದರ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಬೇಕಾದ ಪುಸ್ತಕಗಳನ್ನು ಕಲ್ಪಿಸಲಾಗಿದೆ. ಇನ್ನೂ ಹೆಚ್ಚಿನ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಗೃಹ ಸಚಿವರು ಮಾತನಾಡಿ : ತುಮಕೂರು ಜಿಲ್ಲೆಗೆ ಬರುವಂತಹ ಕ್ಯಾತ್ಸಂದ್ರ ಸುಂಕ ವಸೂಲ ವಸೂಲಿ ಕೇಂದ್ರದಿಂದ ದೊಡ್ಡದಾದ ಸ್ವಾಗತ ಕಮಾನು ನಿರ್ಮಿಸುವಂತ ಗುರಿಯನ್ನು ಹೊಂದಿದ್ದು. ಇದಕ್ಕೆ ಕೇಂದ್ರ ಸಚಿವರಾದಂತ ವಿ ಸೋಮಣ್ಣನವರ ಜೊತೆ ಸ್ವಾಗತ ಕಮಾನು ಉದ್ದೇಶಿಸಿ ಮಾತುಕತೆಯನ್ನು ಹಾಡಿದ್ದು ಮುಂದಿನ ದಿನಗಳಲ್ಲಿ ತುಮಕೂರಿನ ಪ್ರವಾಸಿಗರಿಗೆ ಸ್ವಾಗತ ಕೋರುವ ಕಮಾನು ನಿಲ್ಲುತ್ತದೆ ಎಂಬ ಭರವಸೆಯನ್ನು ಕೊಟ್ಟಿದ್ದು.ತುಮಕೂರು ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಒಟ್ಟು 262 ಹಾಸ್ಟೆಲ್ಗಳಿದ್ದು, 25,450 ವಿದ್ಯಾರ್ಥಿಗಳು ಹಾಸ್ಟೆಲ್ಗಳಲ್ಲಿದ್ದು ವ್ಯಾಸಂಗ ಮಾಡುತ್ತಿದ್ದಾರೆ. ತುಮಕೂರು ನಗರದಲ್ಲಿ 58 ಹಾಸ್ಟೆಲ್ಗಳಿವೆ. 10,544 ವಿದ್ಯಾರ್ಥಿಗಳು ಪ್ರವೇಶ ದಾಖಲಾತಿಯನ್ನು ಪಡೆದುಕೊಂಡಿದ್ದಾರೆ.
ತುಮಕೂರಿನಲ್ಲಿ ಹಾಸ್ಟೆಲ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ತುಮಕೂರು ನಗರಕ್ಕೆ 6 ಹೊಸ ಹಾಸ್ಟೆಲ್ಗಳು ಮಂಜೂರಾಗಿವೆ. ಪ್ರಸಕ್ತ ವರ್ಷದಿಂದ ಬಾಡಿಗೆ ಕಟ್ಟಡಗಳಲ್ಲಿ ಹಾಸ್ಟೆಲ್ಗಳನ್ನು ಪ್ರಾರಂಭಿಸಲಾಗಿದೆ. ಒಂದು ಹಾಸ್ಟೆಲ್ಗೆ 4 ರಿಂದ 5 ಕೋಟಿ ರೂ. ಖರ್ಚಾಗಲಿದ್ದು, ಶೀಘ್ರದಲ್ಲಿ ಹಾಸ್ಟೆಲ್ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ಈ 6 ಹೊಸ ಹಾಸ್ಟೆಲ್ಗಳಲ್ಲಿ 750 ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. ಹಾಗೂ ಇಂಜಿನಿಯರಿಂಗ್ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಎರಡು ಹಾಸ್ಟೆಲ್ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಇದನ್ನು ಶೀಘ್ರದಲ್ಲಿ ಕಾರ್ಯಗತ ಮಾಡಲಾಗುವುದು. ಎಂದು ಹೇಳಿದರು. ವಿದ್ಯಾರ್ಥಿ ನಿಲಯದ ಅಧಿಕಾರಿ ವರ್ಗ.ಪೊಲೀಸ್ ವರಿಷ್ಠ ಅಧಿಕಾರಿ ಅಶೋಕ್ ಸಿಇಓ ಪ್ರಭು ಜಿ
ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಕೃಷ್ಣಪ್ಪ ಮುಂತಾದವರು ಉಪಸ್ಥಿತರಿದ್ದರು.
ವರದಿ : ಭರತ್ ಕೆ