ಮಾದಕ ದ್ರವ್ಯಗಳ ಸೇವನೆಯಿಂದ ಅಪಾಯ ಖಂಡಿತ

ವಿಜಯಪುರ:ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ ಟ್ರಸ್ಟ್, ವಿಜಯಪುರ ವಲಯ. ಎಸ್.ಸಿ.ಐ-ಸರ್ವಿಸ್ ಸಿವಿಲ್ ಇಂಡಿಯಾ ಇಂಟರ್ ನ್ಯಾಷನಲ್ ಕರ್ನಾಟಕ ಗ್ರೂಪ್, ವಿಜಯಪುರ ಆರಕ್ಷಕ ಠಾಣೆ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಂಗವಾಗಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಹಮ್ಮಿಕೊಳ್ಳಲಾಯಿತು

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಬೈರೇಗೌಡರವರು ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾದಕ ವಸ್ತುಗಳ ವ್ಯಸನಗಳಾಗುತ್ತಿದ್ದಾರೆ. ಇದರಿಂದ ಯುವ ಸಮೂಹವು ಎಚ್ಚೆತ್ತುಕೊಂಡು ದುಶ್ಚಟಗಳಿಂದ ದೂರ ಇರಬೇಕು ವಿದ್ಯಾರ್ಥಿಗಳು ಮತ್ತು ಯುವ ಸಮೂಹವನ್ನು ರಕ್ಷಿಸಿ ಅವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಗೋವಿಂದ್ ರವರು ಮಾತನಾಡಿ ಮಾದಕ ವಸ್ತು ಒಂದು ಸಾಮಾಜಿಕ ಪಿಡುಗಾಗಿದ್ದು. ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾದಕ ವಸ್ತುಗಳಿಗೆ ಪ್ರೇರೇಪಿತರಾಗಿ ತಮ್ಮ ಜೀವನವನ್ನು ಕಳೆದುಕೊಳ್ಳುತ್ತಿದ್ದು. ಇಂತಹ ದುಶ್ಚಟಗಳಿಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ದೂರ ಇರಬೇಕು ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಿ ಬೆಳೆಯಬೇಕು ಎಂದು ತಿಳಿಸಿದರು

ಪಟ್ಟಣದ ಆರಕ್ಷಕ ಠಾಣೆಯ ಸಹಾಯಕ ಆರಕ್ಷಕ ನಿರೀಕ್ಷಕ ಹೆಚ್.ಎಸ್ ಏಜಾಜ್ ಮಾತನಾಡಿ ಮಾದಕ ವಸ್ತುಗಳ ಉಪಯೋಗ ಇಂದು ಪ್ರಪಂಚಾದ್ಯಂತ ಕಂಡು ಬರುತ್ತಿರುವ ಒಂದು ಸಾಮಾಜಿಕ ಪಿಡುಗಾಗಿದೆ. ಗಂಡು,ಹೆಣ್ಣು ,ಬಡವ ಮತ್ತು ಶ್ರೀಮಂತ ಎನ್ನುವ ಭೇದವಿಲ್ಲದೆ ಎಲ್ಲೆಡೆಯೂ ಕಂಡುಬರುತ್ತದೆ ಆದ್ದರಿಂದ
ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಇಂಥ ವಸ್ತುಗಳ ಕಳ್ಳಸಾಗಣೆ ಮತ್ತು ಸೇವನೆಯು ಅಪಾಯಕಾರಿ ಮಟ್ಟದಲ್ಲಿ ಬೆಳೆಯುತ್ತಿರುವುದು ಕಂಡು ಬಂದಿದೆ ಆದ್ದರಿಂದ ಯುವಜನತೆ ಮಾದಕ ವ್ಯಸನಗಳಿಗೆ ಒಳಗಾಗದೆ ಸದೃಢ ಪ್ರಜೆಗಳಾಗಬೇಕೆಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಜಯಪುರ ವಲಯ ಮೇಲ್ವಿಚಾರಕ ಹರೀಶ್ ಎಂ ಟಿ ಮಾತನಾಡಿ
ಈ ದೇಶದ ಸಂಪತ್ತು ಯುವ ಸಮೂಹವಾಗಿದ್ದು ದೇಶವನ್ನ ಹಾಳು ಮಾಡಲು ಯುದ್ಧ ಮಾಡಬೇಕಾಗಿಲ್ಲ ಬದಲಿಗೆ ಯುವಕರಲ್ಲಿ ಮಾದಕ ವಸ್ತುಗಳ ಬಳಕೆ ಇಂದ ದೇಶದ ಸಂಪತ್ತು ಹಾಳಾಗುತ್ತಿದೆ ಆದರಿಂದ ವಿದ್ಯಾರ್ಥಿಗಳು ಎಚ್ಚೆತ್ತುಕೊಂಡು ದುಶ್ಚಟ್ಟಗಳಿಂದ ದೂರ ಇರಬೇಕು. ಹಾಗೂ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯೂ ಕೂಡ ಒಂದು ದುಶ್ಚಟವಾಗಿದ್ದು ಮೊಬೈಲ್ ಬಳಕೆಯನ್ನು ಕೂಡ ನಿಯಂತ್ರಣದಲ್ಲಿರಬೇಕು ಸಾಮಾಜಿಕ ಜಾಲತಾನಗಳಲ್ಲಿ ಹೆಚ್ಚು ಸಮಯವನ್ನು ನೀಡುತ್ತಿದ್ದು ಈ ಸಮಯವನ್ನು ಓದಿನ ಕಡೆ ಹೆಚ್ಚು ಗಮನ ಕೊಡಬೇಕು ಎಂದು ತಿಳಿಸಿದರು

ಕಾರ್ಯಕ್ರಮದ ಉಪಸ್ಥಿಯಲ್ಲಿ ರಾಷ್ಟ್ರೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ. ಪ್ರಶಾಂತ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಕರ್, ಸಂಪನ್ಮೂಲ ವ್ಯಕ್ತಿ ಗೋವಿಂದರಾಜ್, ಪಟ್ಟಣದ ಆರಕ್ಷಕ ಠಾಣೆಯ ಗುಪ್ತ ಮಾಹಿತಿ ಅಧಿಕಾರಿ ರಮೇಶ್, ಕೆ. ಮಂಜುನಾಥ್, ಉಪನ್ಯಾಸಕರಾದ ದೇವರಾಜ್, ಜಯಣ್ಣ ಹಾಗೂ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಎನ್.ಎಸ್.ಎಸ್ ಸ್ವಯಂ ಸೇವಕರು ಹಾಜರಿದ್ದರು.