ಮಾದಕ ವಸ್ತು ವಿರೋಧಿ ದಿನಾಚರಣೆ..

ಕೃಷ್ಣರಾಜಪೇಟೆ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್( ರಿ ) ಕೃಷ್ಣರಾಜಪೇಟೆ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ ವತಿಯಿಂದ ತೆಂಡೆಕೆರೆ ವಲಯದ ತೆಂಡೆಕೆರೆ ವಿಭಾಗದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು,_

_ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಆಗಮಿಸಿ ಯುವ ಸಮುದಾಯವು ಯಾವ ರೀತಿಯಲ್ಲಿ ಸಮಾಜದ ಪಿಡುಗಾದ ದುಶ್ಚಟದ ವಿರುದ್ಧ ಹೋರಾಟ ಮಾಡಬೇಕು ಹಾಗೂ ವಿದ್ಯಾರ್ಥಿಗಳ ಪಾತ್ರವನ್ನು ವಿವರಿಸಿದರು,_

_ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯರಾದ ರಾಜೇಶ್, ಶ್ರೀಮತಿ ಪದ್ಮಾವತಿ ಮತ್ತು ತಾಲೂಕು ಯೋಜನಾಧಿಕಾರಿ ತಿಲಕ್ ರಾಜ್, ಮುಖ್ಯಶಿಕ್ಷಕರಾದ ಸುಮಾ, ಮುಖ್ಯ ಬಾಷಣಕಾರರಾಗಿ ಜವರಪ್ಪ, ತೋಟಗಾರಿಕ ಶಿಕ್ಷಕರು ಮತ್ತು ಶಿಕ್ಷಕವೃಂದ, ವಲಯದ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು._

*_ವರದಿ: ಸಾಯಿಕುಮಾರ್. ಎನ್. ಕೆ,_*