*ಜಯಕರ್ನಾಟಕ ಸಂಘಟನೆಯು ಕನ್ನಡ ನಾಡು-ನುಡಿ, ನೆಲ-ಜಲ ಸಂರಕ್ಷಣೆಗೆ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದೆ* ಜಯಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಜಗದೀಶ್
ತಾಲ್ಲೂಕು ಅಧ್ಯಕ್ಷ ಹೊನ್ನೇನಹಳ್ಳಿ ಸೋಮಶೇಖರ್ ನೇತೃತ್ವದಲ್ಲಿ ನಡೆದ ಅದ್ದೂರಿ ರಾಜ್ಯೋತ್ಸವ ಉದ್ಘಾಟಿಸಿ ಅಭಿಪ್ರಾಯ*
ಕೆ.ಆರ್.ಪೇಟೆ,
ಕನ್ನಡ ನಾಡು-ನುಡಿ, ನೆಲ-ಜಲದ ಸಂರಕ್ಷಣೆ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ನಿರ್ಮೂಲನೆಗೆ ಜಯ ಕರ್ನಾಟಕ ಸಂಘಟನೆಯು ಪ್ರಾಮಾಣಿಕವಾಗಿ, ಕ್ರಿಯಶೀಲವಾಗಿ ರಾಜ್ಯದ ಉದ್ದಗಲಕ್ಕೂ ಹೋರಾಟ ಮಾಡುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಜಗದೀಶ್ ಹೇಳಿದರು.
ಅವರು ಕೆ.ಆರ್.ಪೇಟೆ ಪಟ್ಟಣದ ಪುರಸಭಾ ಕಚೇರಿಯ ಪಕ್ಕದ ತಮ್ಮಣ್ಣಗೌಡ ಬಡಾವಣೆ(ಟಿ.ಬಿ.ಬಡಾವಣೆ)ಯಲ್ಲಿ ತಾಲ್ಲೂಕು ಜಯ ಕರ್ನಾಟಕ ಸಂಘಟನೆಯ ವತಿಯಿಂದ ಆಯೋಜಿಸಿದ್ದ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು, ನಿವೃತ್ತ ಯೋಧರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದ ಹೆಮ್ಮೆಯ ಕನ್ನಡಪರ ಸಂಘಟನೆ ಯಾಗಿರುವ ಜಯಕರ್ನಾಟಕ ಸಂಘಟನೆಯು ಅಣ್ಣ ಮುತ್ತಪ್ಪ ರೈ ಅವರ ನೇತೃತ್ವದಲ್ಲಿ ಆರಂಭವಾಗಿ, ಬದ್ಧತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾ, ಕನ್ನಡ ಭಾಷೆ, ನೆಲ ಜಲ ಹಾಗೂ ಸಂಸ್ಕೃತಿಯನ್ನು ಉಳಿಸುವ ದಿಕ್ಕಿನಲ್ಲಿ ಬೀದರ್ನಿಂದ ಚಾಮರಾಜನಗರದ ವರೆಗೆ, ಬೆಳಗಾವಿಯಿಂದ ಬೆಂಗಳೂರುವರೆಗೆ, ಬೆಂಗಳೂರಿನಿಂದ ಮಂಗಳೂರಿನವರೆಗೆ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಶಾಖೆಗಳನ್ನು ತೆರೆದು ಲಕ್ಷಾಂತರ ನಿಸ್ವಾರ್ಥ ಕಾರ್ಯಕರ್ತರು ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಮೂಲಕ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿಯುವ ದಿಕ್ಕಿನಲ್ಲಿ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಕ್ರೀಯಾಶೀಲ ಹೋರಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದ ಡಾ.ಜಗದೀಶ್ ಕನ್ನಡದ ನೆಲದಲ್ಲಿ ವಾಸಿಸುವ ಅನ್ಯ ಭಾಷಿಕರು ಕನ್ನಡವನ್ನು ಕಲಿತು, ಕನ್ನಡ ಭಾಷೆಯನ್ನು ಕಲಿತು ಕನ್ನಡದಲ್ಲಿಯೇ ವ್ಯವಹರಿಸ ಬೇಕು ಎಂಬ ಸಂದೇಶವನ್ನು ನೀಡುವ ಜೊತೆಗೆ, ಕನ್ನಡ ನೆಲ ಜಲ, ಭಾಷೆ ಹಾಗೂ ಸಂಸ್ಕೃತಿಗೆ ಧಕ್ಕೆ ಉಂಟಾದ ಸಮಯದಲ್ಲಿ ಯಾವುದೇ ಹೋರಾಟಕ್ಕೆ ನಮ್ಮ ಸಂಘಟನೆಯ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಸನ್ನದ್ಧರಾಗಿದ್ದಾರೆ ಎಂದು ಹೇಳಿದರು. ಕನ್ನಡದ ನೆಲದಲ್ಲಿ ಯಾವುದೇ ರೀತಿಯ ಗಲಾಟೆ ಗದ್ದಲಗಳು ನಡೆಯದಂತೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುತ್ತಿರುವ ಪೊಲೀಸರು ಅಕಾಲಿಕವಾಗಿ ನಿಧನರಾದರೆ ರಾಜ್ಯ ಸರ್ಕಾರವು ಕೇವಲ 20 ಲಕ್ಷ ರೂಗಳ ಪರಿಹಾರವನ್ನು ನೀಡುತ್ತಿತ್ತು. ಆದರೆ ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಾವು ಹೋರಾಟ ನಡೆಸಿದ ಪರಿಣಾಮ ಕರ್ನಾಟಕ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿಗಳನ್ನು ನೀಡುವುದನ್ನು ಜಾರಿಗೆ ತಂದಿದೆ ಇದು ಜಯ ಕರ್ನಾಟಕ ಸಂಘಟನೆಯ ಹೋರಾಟದ ಶಕ್ತಿ. ನಮ್ಮ ನೆಲ, ಜಲ ಹಾಗೂ ಭಾಷೆಗೆ ವಿಪತ್ತು ಎದುರಾದ ಸಂದರ್ಭದಲ್ಲಿ ನಾವು ಯಾವುದೇ ಹೋರಾಟ ಹಾಗೂ ತ್ಯಾಗ, ಬಲಿದಾನಕ್ಕೆ ಸಿದ್ಧರಾಗಿದ್ದೇವೆ ಎಂದು ಡಾ. ಜಗಧೀಶ್ ಗುಡುಗಿದರು.
ಶಾಸಕ ಹೆಚ್.ಟಿ.ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತೆಂಡೇಕೆರೆ ಬಾಳೆಹೊನ್ನೂರು ಶಾಖ ಮಠದ ಪೂಜ್ಯ ಸ್ವಾಮೀಜಿಗಳಾದ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಪೂಜ್ಯ ಸ್ವಾಮಿಗಳಾದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ಬೆಡದಹಳ್ಳಿಯ ಪಂಚಭೂತೇಶ್ವರ ಮಠದ ಸ್ವಾಮೀಜಿಗಳಾದ ಶ್ರೀ ರುದ್ರಮುನಿ ಸ್ವಾಮೀಜಿ ಅವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.
ಆದಿಚುಂಚನಗಿರಿ ಹೇಮಗಿರಿ ಶಾಖಾಮಠದ ಗೌರವ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡ, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ರಾಜ್ಯ ಆರ್ಟಿಓ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಪ್ರಶಾಂತ್ ಚಕ್ರವರ್ತಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಜಯಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷರು ಹಾಗೂ ರಾಜ್ಯ ಕಾನೂನು ಸಲಹೆಗಾರ ನಾರಾಯಣಸ್ವಾಮಿ, ಗೌರವಾಧ್ಯಕ್ಷ ಮುನಿಸ್ವಾಮಿ, ರಾಜ್ಯ ಉಪಾಧ್ಯಕ್ಷ ವಿಜಯ, ಮಂಡ್ಯ ಜಿಲ್ಲಾಧ್ಯಕ್ಷ ಡಾ.ಯೋಗಣ್ಣ, ಹಾಸ್ಯ ನಟರಾದ ಟೆನ್ನಿಸ್ ಕೃಷ್ಣ, ಕಿರುತೆರೆ ಕಲಾವಿದರಾದ ಶಿವಣ್ಣ, ಚಾರ್ಲಿ ಕುಮಾರ್, ನಂದೀಶ್, ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಅಧ್ಯಕ್ಷ ಹೆಚ್.ಆರ್.ಸೋಮಶೇಖರ್, ತಾಲ್ಲೂಕು ಕಾರ್ಯಾಧ್ಯಕ್ಷ ಅನುವಿನಕಟ್ಟೆ ಕೆರೆಕೋಡಿ ಆನಂದ್, ತಾಲೂಕು ಯುವ ಘಟಕದ ಅಧ್ಯಕ್ಷ ಕೆ.ಎಲ್.ಮಹೇಶ್, ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ, ಸರಸ್ವತಿ, ಮಂಜುಳಾ, ರತ್ನಮ್ಮ, ಮಧು, ಕುಮಾರ್ ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಪ್ರಶಾಂತ್ ಚಕ್ರವರ್ತಿ, ರೈತ ಮುಖಂಡ ವಡಕಹಳ್ಳಿ ಮಂಜಣ್ಣ, ನಿವೃತ್ತ ಸೈನಿಕ ಸುಕುಮಾರ್, ಡಾ.ಶ್ರೀಕಾಂತ್, ಡಾ.ಕಾವ್ಯ, ಅವರನ್ನು ಗಣ್ಯರು ಸನ್ಮಾನಿಸಿ ಗೌರವಿಸಲಾಯಿತು.
ತುಮಕೂರಿನ ದರ್ಶನ್ ಮೆಲೋಡೀಸ್ ಸುಗಮ ಸಂಗೀತ ತಂಡದ ಗಾಯಕರು ಗೀತ ಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.





