--ಜಾಹೀರಾತು--

ಹೊಸಕೋಟೆ ಟೌನ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಬಲ್ಪ್ ಮಂಜುನಾಥ್, ಉಪಾಧ್ಯಕ್ಷರಾಗಿ ಅಕ್ಬರ್ ಪಾಷಾ ಆಯ್ಕೆ

On: December 17, 2025 7:21 PM
Follow us:
--विज्ञापन यहां--

Whatsapp Channel

Join Now

Telegram Group

Join Now
Spread the love

ಹೊಸಕೋಟೆ ಟೌನ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಬಲ್ಪ್ ಮಂಜುನಾಥ್, ಉಪಾಧ್ಯಕ್ಷರಾಗಿ ಅಕ್ಬರ್ ಪಾಷಾ ಆಯ್ಕೆ

ಹೊಸಕೋಟೆ:ನಗರದ ಹೊಸಕೋಟೆ ದಿ ಟೌನ್ ಕೋ ಆಪರೇಟಿವ್ ಬ್ಯಾಂಕಿಗೆ ಅಧ್ಯಕ್ಷರಾಗಿ ಮಂಜುನಾಥ್, ಉಪಾಧ್ಯಕ್ಷರಾಗಿ ಅಕ್ಬರ್ ಪಾಷಾ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರಾಗಿ ಮಂಜುನಾಥ್ , ಬಿಜೆಪಿ ಬೆಂಬಲಿತರಾಗಿ ಕಿರಣ್ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರಾಗಿ ಅಕ್ಬರ್ ಪಾಷ, ಬಿಜೆಪಿ ಬೆಂಬಲಿತರಾಗಿ ವೆಂಕಟಲಕ್ಷ್ಮಿ ನಾಮಪತ್ರ ಸಲ್ಲಿಸಿದರು.

ಚುನಾವಣೆ ನಡೆದ ಸಂದರ್ಭದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತರ ಪಾಲಾಗಿದ್ದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಂಜುನಾಥ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಕ್ಬರ್ ಪಾಷಾ ತಲಾ 8 ಮತಗಳನ್ನು ಪಡೆಯುವುದರ ಮೂಲಕ ಆಯ್ಕೆಯಾದರು.

ನೂತನ ಅಧ್ಯಕ್ಷ ಬಲ್ಬ್ ಮಂಜು ಮಾತನಾಡಿ ಯಾವುದೇ ಸಂಘ ಸಂಸ್ಥೆಗಳಲ್ಲಿ ರಾಜಕೀಯ ಮಾಡಬಾರದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 8, ಬಿಜೆಪಿ ಬೆಂಬಲಿತ 5 ಸದಸ್ಯರು ಆಯ್ಕೆಯಾಗಿದ್ದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಷೇರುದಾರರ ಸುರಕ್ಷೆ ಮತ್ತು ಬ್ಯಾಂಕಿನ ಅಭಿವೃದ್ಧಿಗೆ ಶ್ರಮಿಸಲಾಗುವುದು ಅಲ್ಲದೆ ಚುನಾವಣೆಯಲ್ಲಿ ನೀಡಿದ್ದ ಪ್ರಣಾಳಿಕೆಯನ್ನು ಪ್ರಾಮಾಣಿಕವಾಗಿ ಈಡೇರಿಸುತ್ತೇವೆ ಎಂದರು.

ನೂತನ ಉಪಾಧ್ಯಕ್ಷರಾದ ಅಕ್ಬರ್ ಪಾಷ ಮಾತನಾಡಿ ಟೌನ್ ಬ್ಯಾಂಕ್ ಚುನಾವಣೆ ಫೆಬ್ರವರಿಯಲ್ಲಿ ನಡೆದಿದ್ದು ವಿರೋಧ ಪಕ್ಷದವರು ನ್ಯಾಯಾಲಯದ ಮೊರೆಹೋದ ಹಿನ್ನೆಲೆ ಫಲಿತಾಂಶ ಪ್ರಕಟವಾಗುವುದು ವಿಳಂಬವಾಯಿತು. ಫಲಿತಾಂಶ ವಿಳಂಬವಾಗಿ 8 ಕಾಂಗ್ರೆಸ್ ಬೆಂಬಲಿತರು ಐದು ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದರು. ಈಗ ಬ್ಯಾಂಕಿನಲ್ಲಿ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಲು ಶಾಸಕ ಶರತ್ ಬಚ್ಚೇಗೌಡರ ನಿರ್ದೇಶನದಂತೆ ಎಲ್ಲಾ ನಿರ್ದೇಶಕರು ಕೂಡ ಅವಕಾಶ ಕಲ್ಪಿಸಿದ್ದು ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ಈ ಸಂಧರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಬಿವಿ ಬೈರೇಗೌಡ, ಯೊಜನ ಪ್ರಾದಿಕಾರದ ಅಧ್ಯಕ್ಷ ಕೇಶವಮೂರ್ತಿ , ಮಾಜಿ ಅಧ್ಯಕ್ಷ ಡಾ.ಸಿ.ಜಯರಾಜ್, ಟೌನ್ ಬ್ಯಾಂಕ್ ನೂತನ ನಿರ್ದೇಶಕರುಗಳಾದ ವಿಷ್ಣು, ಗೋಪಾಲ, ಎನ್ ನಾಗರಾಜ್, ಮುರಳಿ, ಸರೋಜಮ್ಮ, ಕಿರಣ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.